TSK

TSK · ಮತ್ತಾಯನು 2:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,

¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.

ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.

ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.

ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.

ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.

‹ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.›

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.

¶ ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.