TSK

TSK · ಮತ್ತಾಯನು 2:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.

ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.

ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

¶ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,

ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.

ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.