ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
TSK
TSK · ಮತ್ತಾಯನು 2:23
Treasury of Scripture Knowledge references in ಕನ್ನಡ IRV.
“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
ಆಗ ಆತನು ಪುನಃ ಅವರಿಗೆ ‹“ನೀವು ಯಾರನ್ನು ಹುಡುಕುತ್ತೀರಿ?”› ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.