TSK

TSK · ಮತ್ತಾಯನು 20:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.

ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.

ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›

‹ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.›

ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.

ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.

¶ ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.