TSK

TSK · ಮತ್ತಾಯನು 21:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

¶ ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.