TSK

TSK · ಮತ್ತಾಯನು 21:44

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.

ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”

ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.

ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.