TSK

TSK · ಮತ್ತಾಯನು 22:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.

ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.

ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

¶ ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.

‹ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ”› ಅಂದನು.

ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.

ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಯೇಸು ಅವರಿಗೆ, ‹“ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ”› ಎಂದು ಎಚ್ಚರಿಸಿದನು.

ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.

ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.

ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›

ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

¶ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.