TSK

TSK · ಮತ್ತಾಯನು 22:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.

ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.

ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.

“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.

ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?

ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.