TSK

TSK · ಮತ್ತಾಯನು 22:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.

ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

‹ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.›

¶ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›

‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?