¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
TSK
TSK · ಮತ್ತಾಯನು 22:42
Treasury of Scripture Knowledge references in ಕನ್ನಡ IRV.
¶ ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.
¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
¶ ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
¶ ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.
¶ ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, ‹“ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ”› ಎಂದು ತನ್ನ ಶಿಷ್ಯರನ್ನು ಕೇಳಿದನು.
ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.