TSK

TSK · ಮತ್ತಾಯನು 23:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›

‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›

ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.

ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.

ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.