TSK

TSK · ಮತ್ತಾಯನು 23:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

¶ ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›

¶ ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?

ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.

ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.