ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
TSK
TSK · ಮತ್ತಾಯನು 23:35
Treasury of Scripture Knowledge references in ಕನ್ನಡ IRV.
“ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.
ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
¶ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
¶ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.