ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
TSK
TSK · ಮತ್ತಾಯನು 23:37
Treasury of Scripture Knowledge references in ಕನ್ನಡ IRV.
¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.
ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
“ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.
¶ ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›
‹ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.›
‹ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.›
‹ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.›
‹ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.›
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.