¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
TSK
TSK · ಮತ್ತಾಯನು 24:14
Treasury of Scripture Knowledge references in ಕನ್ನಡ IRV.
¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
‹‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.›
¶ ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು
ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›
¶ ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
¶ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.