ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.
TSK
TSK · ಮತ್ತಾಯನು 24:48
Treasury of Scripture Knowledge references in ಕನ್ನಡ IRV.
ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”
‹ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?›
‹ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,›
‹ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?›
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,