TSK

TSK · ಮತ್ತಾಯನು 25:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,

ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

¶ ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.

¶ ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.

ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.

ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.

¶ “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.

ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

¶ ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.