ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
TSK
TSK · ಮತ್ತಾಯನು 25:32
Treasury of Scripture Knowledge references in ಕನ್ನಡ IRV.
ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು›
‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.