‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
TSK
TSK · ಮತ್ತಾಯನು 25:41
Treasury of Scripture Knowledge references in ಕನ್ನಡ IRV.
ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
‹ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.›
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು›
‹ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.›
‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›
‹ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.›
‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
¶ ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.