ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
TSK
TSK · ಮತ್ತಾಯನು 26:3
Treasury of Scripture Knowledge references in ಕನ್ನಡ IRV.
ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.
ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;
¶ ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
¶ ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.