“ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು; ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವುದಾದರೆ ಎಷ್ಟೋ ಒಳ್ಳೆಯದು.
TSK
TSK · ಮತ್ತಾಯನು 26:38
Treasury of Scripture Knowledge references in ಕನ್ನಡ IRV.
ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?
“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, ‹“ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?›
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.