ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.
TSK
TSK · ಮತ್ತಾಯನು 27:2
Treasury of Scripture Knowledge references in ಕನ್ನಡ IRV.
¶ ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ
‹ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,›
¶ ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.
ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
¶ ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.