TSK

TSK · ಮತ್ತಾಯನು 27:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ,

ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.

“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.

ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ

ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.

ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.