ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
TSK
TSK · ಮತ್ತಾಯನು 28:19
Treasury of Scripture Knowledge references in ಕನ್ನಡ IRV.
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
¶ ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›
‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.
ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
¶ ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
¶ ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
¶ ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ