TSK

TSK · ಮತ್ತಾಯನು 28:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.

ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.

¶ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›

‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›

¶ ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು

¶ ‹“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.›

ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; ‹“ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,›

¶ ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

¶ ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.

¶ ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.

¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›