ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”
TSK
TSK · ಮತ್ತಾಯನು 3:10
Treasury of Scripture Knowledge references in ಕನ್ನಡ IRV.
ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, ‹“ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ”› ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
¶ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, ‹“ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.›
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
¶ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?