TSK

TSK · ಮತ್ತಾಯನು 3:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?

ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.

ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.

ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.

ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.

ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.

ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.

ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.

‹ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,›‹ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’”› ಅಂದನು.

‹ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ› ಅಂದನು.

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.