TSK

TSK · ಮತ್ತಾಯನು 4:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.

‹ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.›‹ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು›

‹ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ›‹ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.›

ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.

ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.