‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›
TSK
TSK · ಮತ್ತಾಯನು 5:10
Treasury of Scripture Knowledge references in ಕನ್ನಡ IRV.
‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›
¶ ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, ‹“ಬಡವರಾದ ನೀವು ಧನ್ಯರು;› ‹ದೇವರ ರಾಜ್ಯವು ನಿಮ್ಮದೇ.›
‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›
¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.
ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
¶ ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.