TSK

TSK · ಮತ್ತಾಯನು 5:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.

ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.

ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.

ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.

‹ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.›

‹ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.›

‹ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,›

‹ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.›

‹ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.›

ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

¶ ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.

ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.

ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.