¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›
TSK
TSK · ಮತ್ತಾಯನು 5:20
Treasury of Scripture Knowledge references in ಕನ್ನಡ IRV.
‹“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ›‹ಕುಳಿತುಕೊಂಡಿದ್ದಾರೆ;›
‹ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ”› ಎಂದು ಹೇಳಿದನು.
ಆದರೆ ಕರ್ತನು ಅವನಿಗೆ, ‹“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.›
¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›
ಅದೇನೆಂದರೆ, ‹“ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.›
ಆಗ ಯೇಸು ಅವನನ್ನು ನೋಡಿ, ‹“ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.›
ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.
ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.