TSK

TSK · ಮತ್ತಾಯನು 5:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

¶ ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.

ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

¶ ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಸೌಲನು, “ಅಹೀಟೂಬನ ಮಗನೇ ಕೇಳು” ಅಂದನು. ಅದಕ್ಕೆ ಅವನು, “ಒಡೆಯಾ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟನು.

ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

¶ ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.

ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.

ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.

ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.

ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.

ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.

¶ ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.

¶ ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.

‹ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,›

‹ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.›

‹ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.›

‹ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.›

ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.

¶ ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.›

‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

¶ ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.

‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›

¶ ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,

ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.

ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?

“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?

ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.

ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.