ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,
TSK
TSK · ಮತ್ತಾಯನು 5:3
Treasury of Scripture Knowledge references in ಕನ್ನಡ IRV.
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›
‹ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು”› ಎಂದು ಹೇಳಿದನು.
‹“ಆದರೆ ನೀವು ಧನ್ಯರು ಏಕೆಂದರೆ›‹ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.›
‹ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.›
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, ‹“ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.›
¶ ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, ‹“ಬಡವರಾದ ನೀವು ಧನ್ಯರು;› ‹ದೇವರ ರಾಜ್ಯವು ನಿಮ್ಮದೇ.›
‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›