TSK

TSK · ಮತ್ತಾಯನು 5:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.

ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

¶ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.

ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,

‹ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;›

‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›

ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,