ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
TSK
TSK · ಮತ್ತಾಯನು 8:29
Treasury of Scripture Knowledge references in ಕನ್ನಡ IRV.
ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
¶ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.