‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›
TSK
TSK · ಮತ್ತಾಯನು 9:37
Treasury of Scripture Knowledge references in ಕನ್ನಡ IRV.
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, ‹“ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.›
‹‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.›
‹ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ”› ಎಂದು ಹೇಳಿದನು.
¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.
¶ ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.