ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
TSK
TSK · ಮತ್ತಾಯನು 9:38
Treasury of Scripture Knowledge references in ಕನ್ನಡ IRV.
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
¶ ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
ಯೇಸು ಅವರಿಗೆ, ‹“ನಿಮಗೆ ಸಮಾಧಾನವಾಗಲಿ”› ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.