TSK

TSK · ಮತ್ತಾಯನು 9:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.

ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.

¶ ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, ‹“ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?›

¶ ಅದಕ್ಕೆ ಯೇಸು, ‹“ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ”› ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.

ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, ‹“ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.›

ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ ‹“ಈ ಮಾತಿನಿಂದ ನಿಮಗೆ ಬೇಸರವಾಯಿತೋ?›

ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, ‹“ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?›

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.