¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
TSK
TSK · ಮಿಕ 1:9
Treasury of Scripture Knowledge references in ಕನ್ನಡ IRV.
ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.
ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.