ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
TSK
TSK · ಮಿಕ 2:3
Treasury of Scripture Knowledge references in ಕನ್ನಡ IRV.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.
¶ ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.
ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.
¶ “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.
ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.