TSK

TSK · ಮಿಕ 2:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

¶ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.