ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
TSK
TSK · ಮಿಕ 3:7
Treasury of Scripture Knowledge references in ಕನ್ನಡ IRV.
(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು.
ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.