TSK

TSK · ಮಿಕ 3:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.

ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.

ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

¶ “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,

¶ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.

¶ ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.

ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;

¶ ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.