ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
TSK
TSK · ಮಿಕ 4:13
Treasury of Scripture Knowledge references in ಕನ್ನಡ IRV.
ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
¶ ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.
“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.
ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.
ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.
¶ “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.