TSK

TSK · ಮಿಕ 4:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.

ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.

ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.

ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.

ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.

ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.

¶ ‹“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು›‹ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು›‹ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.›

ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.