ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
TSK
TSK · ಮಿಕ 5:13
Treasury of Scripture Knowledge references in ಕನ್ನಡ IRV.
ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.