TSK

TSK · ಮಿಕ 5:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

¶ ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ

ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.

¶ ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.

ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.

ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು.

ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಯೆಹೋವನು ತನ್ನ ಸೃಷ್ಟಿಕ್ರಮದಲ್ಲಿ ಮೊದಲು ನನ್ನನ್ನು ನಿರ್ಮಿಸಿದನು; ಆತನ ಪುರಾತನಕಾರ್ಯಗಳಲ್ಲಿ ನಾನೇ ಪ್ರಥಮ.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›

ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.

¶ ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.

ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.

¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

¶ ‹“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,›‹ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ›‹ಹೇಳುವುದೇನಂದರೆ,›

ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.