TSK

TSK · ಮಿಕ 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.

ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು

ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”

¶ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.

ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.

ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.