ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.
TSK
TSK · ಮಿಕ 7:10
Treasury of Scripture Knowledge references in ಕನ್ನಡ IRV.
¶ ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.
ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’
ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ?
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.
ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”
‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.
ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.
ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.