‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.
TSK
TSK · ನಹೂಮ 1:4
Treasury of Scripture Knowledge references in ಕನ್ನಡ IRV.
ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!